Monday, November 30, 2009

ಎಲ್ಲಾದರು ಇರು ಎಂತಾದರು ಇರು.......

ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ನೀ ಮುಟ್ಟುವ ನೆಲ ಅದೆ ಕರ್ನಾಟಕ
ನೀನೇರುವ ಮಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಶ್ರೀಗಂಧದ ಮರ
ನೀ ಕುಡಿಯುವ ನೀರ್ ಕಾವೇರಿ
ಪಂಪನೋದುವ ನಿನ್ನಾ ನಾಲಗೆ ಕನ್ನಡವೇ ಸತ್ಯ
ಕುಮಾರವ್ಯಾಸನನಾಲಿಪ ಕಿವಿಯದು ಕನ್ನಡವೇ ನಿತ್ಯ
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು

ಹರಿಹರ ರಾಘವರಿಗೆ ಎರಗುವ ಮನ
ಹಾಳಾಗಿಹ ಹಂಪೆಗೆ ಕೊರಗುವ ಮನ
ಪಿಂಪಿನ ಬನವಾಸಿಗೆ ಕರಗುವ ಮನ
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ
ಜೊಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಒಂಪುಳಿಹೋಗುವ ಮನ
ಕನ್ನದವೇ ಸತ್ಯ ಕನ್ನದವೇ ನಿತ್ಯ
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು

ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ
ಮಲ್ಲಿಗೆ ಸಂಪಿಗೆ ಕೇದಗೆ ಕಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ
ರಸರೋಮಾಂಚನಗೊಳುವಾತನಾ ಮನ
ಎಲ್ಲಿದ್ದರೆ ಏನ್ ಎಂತಿದ್ದರೆ ಏನ್
ಎಂದೆಂದಿಗು ತಾನ್ ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಅನ್ಯವೆನಲದೇ ಮಿತ್ಯ
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಕನ್ನಡವೇ ಸತ್ಯ ಕನ್ನಡವೇ ನಿತ್ಯ

No comments:

Post a Comment